TSK

TSK · ಯೆಶಾಯ 5:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.

ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ.

ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.

ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.

ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”

¶ ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.

¶ ‹“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.›

¶ ‹“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.›

ಆಗ ಆತನು ಅವರಿಗೆ ಹೇಳಿದ್ದೇನಂದರೆ, ‹“ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.›

¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.