ಯೋಬನು 11:12
TSK
ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.
TSK
Treasury of Scripture Knowledge references in ಕನ್ನಡ IRV.
ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.
ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.