¶ ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.
TSK
TSK · ಯೆಶಾಯ 5:23
Treasury of Scripture Knowledge references in ಕನ್ನಡ IRV.
ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.
ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು