TSK

TSK · ಯೆಶಾಯ 5:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.

ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,

ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.

ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.