ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.
TSK
TSK · ಯೆಶಾಯ 5:6
Treasury of Scripture Knowledge references in ಕನ್ನಡ IRV.
¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
¶ ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.
ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
¶ ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.
“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.