TSK

TSK · ಯೆಶಾಯ 5:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?

¶ ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.

ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.

ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!

¶ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.

ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.

ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.

ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.

ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.

“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,

‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.›

‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›

ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.