ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.
TSK
TSK · ಯೆಶಾಯ 51:12
Treasury of Scripture Knowledge references in ಕನ್ನಡ IRV.
ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?
ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.
“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.
ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”
ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
‹ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.›
¶ ‹“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.›
¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
¶ ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.