ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.
TSK
TSK · ಯೆಶಾಯ 51:13
Treasury of Scripture Knowledge references in ಕನ್ನಡ IRV.
ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.
ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.
ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?
ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,
“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,
ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.
ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.
ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.
¶ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”
ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.
ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.