TSK

TSK · ಯೆಶಾಯ 51:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.

ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.

ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.

ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.

ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.

ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”

ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.

‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›

ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

¶ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

¶ ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.