¶ ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.
TSK
TSK · ಯೆಶಾಯ 52:12
Treasury of Scripture Knowledge references in ಕನ್ನಡ IRV.
¶ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
¶ ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.
ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.