TSK

TSK · ಯೆಶಾಯ 52:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.

ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;

ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

¶ ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›

ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.

¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.