TSK

TSK · ಯೆಶಾಯ 52:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.

ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.

ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

¶ ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.

ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.

ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!

ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,

ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.

ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.

ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.

“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

¶ “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.

¶ ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.

¶ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.

¶ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.

ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.