ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
TSK
TSK · ಯೆಶಾಯ 53:11
Treasury of Scripture Knowledge references in ಕನ್ನಡ IRV.
ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.
ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು›
‹ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.›
ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.
ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.
¶ ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.