TSK

TSK · ಯೆಶಾಯ 53:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.

ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.

ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.

ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”

ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.

ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.

ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,

ಅದಕ್ಕೆ ಯೇಸು ಅವರಿಗೆ, ‹“ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?›

¶ ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.

ಯೇಸು ಅವರಿಗೆ, ‹“ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ”› ಎಂದು ಹೇಳಿದನು.

¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, ‹“ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.›

ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.

¶ ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.

ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.