ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
TSK
TSK · ಯೆಶಾಯ 53:5
Treasury of Scripture Knowledge references in ಕನ್ನಡ IRV.
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.
ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.
¶ ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.
ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.