ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.
TSK
TSK · ಯೆಶಾಯ 53:8
Treasury of Scripture Knowledge references in ಕನ್ನಡ IRV.
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು.
¶ ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.