TSK

TSK · ಯೆಶಾಯ 54:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.

ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.

ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.

ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.

ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

¶ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.

¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›

¶ ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, ‹“ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.›

‹‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.›

‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.

ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.

ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.

¶ ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.