TSK

TSK · ಯೆಶಾಯ 55:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.

ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.

ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.

ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.

ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.