TSK

TSK · ಯೆಶಾಯ 55:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?

ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.

ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,

“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.

ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.

ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.

ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!

ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

¶ ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.

ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.

¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›

‹ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು›

¶ ಯೇಸು ತಿರುಗಿ ಅವರಿಗೆ, ‹“ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ”› ಎಂದನು.

¶ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.

ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.