ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಯೆಶಾಯ 56:8
Treasury of Scripture Knowledge references in ಕನ್ನಡ IRV.
ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
“ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.
¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,
ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.
¶ ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.
ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.