ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
TSK
TSK · ಯೆಶಾಯ 57:18
Treasury of Scripture Knowledge references in ಕನ್ನಡ IRV.
¶ ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.
ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.
‹ಎದ್ದು ತನ್ನ ತಂದೆಯ ಕಡೆಗೆ ಬಂದನು.› ‹“ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.›
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.