ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
TSK
TSK · ಯೆಶಾಯ 57:2
Treasury of Scripture Knowledge references in ಕನ್ನಡ IRV.
ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.
ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
ಆದರೆ ಆತನು ಆ ಹೆಂಗಸಿಗೆ, ‹“ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು”› ಎಂದು ಹೇಳಿದನು.
¶ ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.