ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?
TSK
TSK · ಯೆಶಾಯ 57:4
Treasury of Scripture Knowledge references in ಕನ್ನಡ IRV.
ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
¶ ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.
ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.
ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.
ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.
ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
¶ “ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.
‹ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ›‹ರಾಜ್ಯದ ಮಕ್ಕಳು.›
ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,
ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.
ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.