TSK

TSK · ಯೆಶಾಯ 57:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.

¶ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.

¶ ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.

ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.

¶ ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.

ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.

ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.

ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.

ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.

ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.

ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;

ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.”

ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.

¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.