TSK

TSK · ಯೆಶಾಯ 58:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು

“ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.

ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.

ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.

ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ, ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ,

¶ ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.

ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.

ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,

‹ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;›

ಆತನು ಅವನಿಗೆ, ‹“ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?”› ಎಂದು ಕೇಳಿದನು.

ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.

ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.

ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.

ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.

ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?