ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.
TSK
TSK · ಯೆಶಾಯ 59:14
Treasury of Scripture Knowledge references in ಕನ್ನಡ IRV.
ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ.
¶ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.
ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.
ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
¶ ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!