ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
TSK
TSK · ಯೆಶಾಯ 6:1
Treasury of Scripture Knowledge references in ಕನ್ನಡ IRV.
ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.
ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
¶ ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
¶ ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.
¶ ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.
¶ ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.
ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.