TSK

TSK · ಯೆಶಾಯ 60:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!

ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.

ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.

¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.›

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.