TSK

TSK · ಯೆಶಾಯ 60:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.

ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.

ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.

¶ ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.

ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.

ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.

ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.

ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,

ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.

ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.

ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.

ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.

¶ ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.

ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.

ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›

ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.