TSK

TSK · ಯೆಶಾಯ 62:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.

¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.

ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.

ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.

ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.

ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.

ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.

ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.

ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.