TSK

TSK · ಯೆಶಾಯ 62:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.

ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.

ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.

ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.

ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.

“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.

¶ ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, ‹“ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.›

ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.

ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

¶ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.

ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.