TSK

TSK · ಯೆಶಾಯ 62:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.

ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.

ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,

ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.

ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,