TSK

TSK · ಯೆಶಾಯ 63:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.

ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.

ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.

ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.

ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.

ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.

ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.

¶ ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.