TSK

TSK · ಯೆಶಾಯ 63:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.

ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.

ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.

ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.

ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಫಲವತ್ತಾದ ವಿಶಾಲವಾದ ದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಆರಾಧಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದುದರಿಂದಲೇ ನಾವು ಈಗ ದಾಸರಾಗಿದ್ದೇವೆ.

ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.

ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.

ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.

ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.

ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.

ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.

ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.

ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.

ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.

¶ “‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.

ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,

ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,