TSK

TSK · ಯೆಶಾಯ 63:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.

¶ ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.

¶ ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.

ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.

ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.

ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

‹ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

¶ “ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.

ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.

¶ ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.

ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,