TSK

TSK · ಯೆಶಾಯ 64:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.

ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.

ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.

ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.

ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.

ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›

‹ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು›‹ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.›

ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.

ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”

ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.

ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

¶ ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.

¶ ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.

¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,