TSK

TSK · ಯೆಶಾಯ 64:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,

ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.

ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?

ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.

ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.

ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.

ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,

ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.

ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.

ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.

ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.

ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.

ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

ಆಗ ದೂತನು ಹೇಳಿದ್ದೇನೆಂದರೆ, “ಇದು ದುಷ್ಟತ್ವವು” ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.

ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?

ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.

ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.

‹ನೀನು ನಿನ್ನ ವಿಷಯದಲ್ಲಿ›‹ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,›‹ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.›