ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
TSK
TSK · ಯೆಶಾಯ 65:2
Treasury of Scripture Knowledge references in ಕನ್ನಡ IRV.
ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.
ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.
ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;
ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.
‹ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.›
‹ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!›
¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.