TSK

TSK · ಯೆಶಾಯ 8:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.

ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.

¶ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.

ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.

ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.

ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, ‹“ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;›

ಅದಕ್ಕೆ ಆತನು ‹“ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?”› ಎಂದನು.

‹ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,›

‹ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.›

¶ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.

ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.