¶ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.
TSK
TSK · ಯೆಶಾಯ 8:21
Treasury of Scripture Knowledge references in ಕನ್ನಡ IRV.
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.
ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.
ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.
ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.