ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,
TSK
TSK · ಯೆಶಾಯ 8:6
Treasury of Scripture Knowledge references in ಕನ್ನಡ IRV.
¶ ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.
¶ ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
“ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ?