ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
TSK
TSK · ಯೆಶಾಯ 8:7
Treasury of Scripture Knowledge references in ಕನ್ನಡ IRV.
ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.
ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.
ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.
ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.
ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.
‹ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.›
¶ ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.