TSK

TSK · ಯೆಶಾಯ 9:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು.

ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು

ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ,

ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.

ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.

ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.

ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.

ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.

ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.

¶ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.

ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.

ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.

ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;

ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.

ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

¶ ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.

“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”

ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›

ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.

‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.

¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.

ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.

ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.

ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.

ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.