¶ ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
TSK
TSK · ಯಾಕೋಬನು 1:12
Treasury of Scripture Knowledge references in ಕನ್ನಡ IRV.
ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.
ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.
ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
ಯೇಸು ಅವರಿಗೆ, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ›‹ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.›
‹ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.›
¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
¶ ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›
‹ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ›‹ಜಯಶಾಲಿಯಾದವನಿಗೆ›‹ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.›