ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”
TSK
TSK · ಯಾಕೋಬನು 1:18
Treasury of Scripture Knowledge references in ಕನ್ನಡ IRV.
ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.
ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
¶ ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.