TSK

TSK · ಯಾಕೋಬನು 1:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.

ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.

ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.

ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?

ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.

ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.

ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

¶ ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.

¶ ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

¶ ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.

ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.

“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.

¶ ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.

¶ ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.