TSK

TSK · ಯಾಕೋಬನು 2:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.

ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.

ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.

ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.

ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.

¶ ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.

ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.

¶ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.

ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.

ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?

ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’

¶ ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.

¶ ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,

ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.

¶ ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.

¶ ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;

ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,

ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.