TSK

TSK · ಯಾಕೋಬನು 3:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.

ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.

ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.

‹ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.›

¶ “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,

ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.

ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.

ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?

ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?

ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.

¶ ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.

ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.

ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.

ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.

ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.

¶ ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;