TSK

TSK · ಯಾಕೋಬನು 3:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.

ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.

ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.

ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?

ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.

¶ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.

¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

¶ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.

ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.

‹ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.›

¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

¶ ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

¶ ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.

¶ ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.

ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು

ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.

¶ ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.

ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.

¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.