ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.
TSK
TSK · ಯಾಕೋಬನು 4:2
Treasury of Scripture Knowledge references in ಕನ್ನಡ IRV.
ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.
‹ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.›
‹ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.›
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.